ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್
ಬಾಗಲಕೋಟೆ (ಕೊಪ್ಪಳ) : ಈ ಭಾಗದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಸಿದ್ಧನಕೊಳ್ಳದಲ್ಲಿ ಶ್ರೀ ಸಿದ್ಧಶ್ರೀ ರಾಷ್ಟ್ರೀಯ ಉತ್ಸವ ಹಾಗೂ ಅಂತರಾಷ್ಟ್ರೀಯ ಚಲನಚಿತ್ರೋತ್ಸವ –2022 ಕ್ಕೆ ಕ್ಷಣಗಣನೆ ಆರಂಭವಾಗಿದೆ..!
ಡಾ.ಶಿವಕುಮಾರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರಗುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತನಾಮರು ಭಾಗವಹಿಸುವರು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ , ಹುನಗುಂದ ಶಾಸಕ ದೊಡ್ಡನಗೌಡ ಜಿ ಪಾಟೀಲ, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು, ಮಾಜಿ ಸಚಿವರಾದ ಸಂಕೇಶ್ವರ ಎ.ಬಿ.ಪಾಟೀಲ, ಸಿ.ಎಸ್.ನಾಡಗೌಡ್ರ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಚಲಚಿತ್ರ ನಿರ್ಮಾಪಕ ನಟ ಡಾ.ಪ್ರವೀಣ ಪತ್ರಿ ಸೇರಿದಂತೆ ನಾಡಿನ ಖ್ಯಾತ ಕಲಾವಿದರು ಭಾಗವಹಿಸುವರು.
ಹ್ಯೇಲಿಕ್ಯಾಪ್ಟರ್ ಸೇವೆ : ದಿನಾಂಕ 13-02-2022 ರಂದು ಸಿದ್ಧನಕೊಳ್ಳದ ಮಹಾತಪಸ್ವಿ ಪರಮಪೂಜ್ಯ ಲಿಂಗೈಕ್ಯ ಸಿದ್ದಪ್ಪಪ್ಪಜ್ಜನವರ ಅವರ ಕತೃ ಗದ್ದುಗೆಗೆ ಪುಷ್ಪಾರ್ಚಣೆ ವಿಶೇಷ ಕಾರ್ಯಕ್ರಮ ಜರಗುವುದು.