ಕೊಪ್ಪಳ ಜಿಲ್ಲಾಧಿಕಾರಿಯಾಗಿ ಎಂ. ಸುಂದರೇಶ ಬಾಬು ಅಧಿಕಾರ ಸ್ವೀಕಾರ

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಕೊಪ್ಪಳ ಜಿಲ್ಲಾಧಿಕಾರಿಯಾಗಿ 2012 ನೇ  ಐಎಎಸ್ ಬ್ಯಾಚ್ ನ  ಎಂ.ಸುಂದರೇಶ ಬಾಬು ಅವರು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಇವರಿಂದ ಅಧಿಕಾರ ಸ್ವೀಕರಿಸಿದರು..!

ಇಲ್ಲಿಯವರೆಗೂ ಆಡಳಿತದಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ ಕಿಶೋರ್ ಅವರನ್ನು ಸರಕಾರ ಕೆ.ಪಿ.ಎಸ್.ಸಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆಗೊಳಿಸಿತ್ತು. ತೆರವಾಗಿದ್ದ ಸ್ಥಾನಕ್ಕೆ ಪಕ್ಕದ ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶ ಬಾಬು ಅವರನ್ನು ನೇಮಕಗೊಳಿಸಿತ್ತು. ಸುರಳ್ಕರ್ ವಿಕಾಸ ಕಿಶೋರ್ ಅವರ ವೇಗದ ಮತ್ತು ಖಡಕ್ ಆಡಳಿತ ಪರಿ ಜಿಲ್ಲೆಯ ಜನಮಾನಸದಲ್ಲಿ ಉಳಿದುಕೊಂಡಿತು..!!